“ಲೋಕಸಭೆ ಚುನಾವಣೆ ಒಳಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ರಾಜ್ಯದಲ್ಲಿ ಕ್ರಾಂತಿ” ಬಸವನಗೌಡ ಪಾಟೀಲ್ ಎಚ್ಚರಿಕೆ

0
ಪಂಚಮಸಾಲಿ 2ಎ ಮೀಸಲಾತಿ ಹೋರಾಟ

ಬೆಳಗಾವಿ, 13/12/2023: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲೇಬೇಕು ಎಂದು ಅಗ್ರಹಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಬುಧವಾರದಂದು ಧರಣಿ ನಡೆಸಲಾಯಿತು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಒಂದು ದಿನದ ಸಾಂಕೇತಿಕ ಹೋರಾಟ ನಡೆಸಲಾಯಿತು.

ಕಳೆದ ವಿಧಾನಸಭೆ ಚುನಾವಣೆ ವೇಳೆ ತಾರಕಕ್ಕೇರಿದ್ದ ಪಂಚಮಸಾಲಿ ಮೀಸಲು ಹೋರಾಟ ಇದೀಗ ಲೋಕಸಭೆ ಚುನಾವಣೆ ವೇಳೆ ಮತ್ತೆ ಭುಗಿಲೇಳುವ ಲಕ್ಷಣ ಗೋಚರಿಸುತ್ತಿದೆ.

“ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚೆನ್ನಾಗಿದ್ದೇನೆ ಎಂದು ಬಹಳ ಜನ ಹೇಳುತ್ತಾರೆ. ನಾವು ಯಾರ ಜೊತೆಗೆ ಚೆನ್ನಾಗಿದ್ದರೂ, ಚೆನ್ನಾಗಿರದಿದ್ದರೂ ಸಮಾಜಕ್ಕಾಗಿ ಹೋರಾಟ ಮಾತ್ರ ನಿಲ್ಲಿಸುವುದಿಲ್ಲ. ಸರ್ಕಾರಗಳು ಬರುತ್ತವೆ, ಹೋಗುತ್ತವೆ ಮೀಸಲಾತಿ ಪಡೆಯುವವರಿಗೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ” ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು.

“ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚೆನ್ನಾಗಿದ್ದೇನೆ ಎಂದು ಬಹಳ ಜನ ಹೇಳುತ್ತಾರೆ. ನಾವು ಯಾರ ಜೊತೆಗೆ ಚೆನ್ನಾಗಿದ್ದರೂ, ಚೆನ್ನಾಗಿರದಿದ್ದರೂ ಸಮಾಜಕ್ಕಾಗಿ ಹೋರಾಟ ಮಾತ್ರ ನಿಲ್ಲಿಸುವುದಿಲ್ಲ”

-ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಹೋರಾಟ ಸಮಿತಿಯ ಅಧ್ಯಕ್ಷರಾದ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ “ನಿಮ್ಮ ಸರಕಾರ ಇದ್ದಾಗ ನಾನು ಮುಖ್ಯಮಂತ್ರಿ ವಿರುದ್ಧವೇ ಸಿಡಿದೆದ್ದು ಹೋರಾಡಿದ್ದೇನೆ. ಈಗ ಕಾಂಗ್ರೆಸ್ ಸರ್ಕಾರವಿದೆ. ಕಾಂಗ್ರೆಸ್ ನಲ್ಲಿರುವ ನಮ್ಮ ಸಮಾಜದ ಸಚಿವರು ಶಾಸಕರು ಸಮಾಜದ ಪರವಾಗಿ ನಿಲ್ಲಬೇಕು” ಎಂದು ಅಗ್ರಹಿಸಿದರು.

“ಬರುವ ಲೋಕಸಭೆ ಚುನಾವಣೆ ಒಳಗೆ ಮೀಸಲಾತಿ ಘೋಷಿಸಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಕ್ರಾಂತಿಯಾಗಲಿದೆ” ಎಂದು ಬಸವನಗೌಡ ಪಾಟೀಲ್ ಎಚ್ಚರಿಸಿದರು

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ವಾರಗಳ ಕಾಲಾವಕಾಶ ಕೇಳಿದ್ದಾರೆ ಕಾನೂನು ತೊಡಕು ಹಾಗು ಸಾಧ್ಯತೆಗಳ ಬಗ್ಗೆ ಚರ್ಚಿಸಿ ನಿರ್ಧಾರಕ್ಕೆ ಬರುತ್ತೇನೆ ಅಂದಿದ್ದಾರೆ ಇನ್ನೆರಡು ವಾರ ಕಾಯೋಣ, ಲೋಕಸಭೆ ಚುನಾವಣೆ ಬರುವ ಮೀಸಲಾತಿ ಘೋಷಿಸಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಕ್ರಾಂತಿಯಾಗಲಿದೆ” ಎಂದು ಬಸವನಗೌಡ ಪಾಟೀಲ್ ಎಚ್ಚರಿಸಿದರು. ಪಂಚಮಸಾಲಿ ಮುಖಂಡರು ಮಠಾಧೀಶರು ಮಂಗಳವಾರ ಮುಖ್ಯಮಂತ್ರಿ, ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮೀಸಲಾತಿಗಾಗಿ ಚರ್ಚಿಸಿದ್ದರು. ಈ ಕಡೆ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತು ಅಧಿವೇಶನ ಮುಗಿದ ಕೂಡಲೇ ಕಾನೂನು ತಜ್ಞರು, ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮತ್ತು ಅಡ್ವಕೇಟ್ ಜನರಲ್ ಜೊತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಪಂಚಮಸಾಲಿ 2ಎ ಮೀಸಲಾತಿ ಹೋರಾಟ
ಪಂಚಮಸಾಲಿ 2ಎ ಮೀಸಲಾತಿ ಹೋರಾಟ

“ರಾಣಿ ಚೆನ್ನಮ್ಮನ ರಕ್ತ ಪಂಚಮಸಾಲಿಗರ ಮೈಯಲ್ಲಿ ಹರಿಯುತ್ತಿದೆ”: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

“ಇದುವರೆಗೆ ಸಮಾಜಕ್ಕೆ ಹೋರಾಟ ಮಾಡದೆ ಏನು ಸಿಕ್ಕಿಲ್ಲ. ರಾಣಿ ಚೆನ್ನಮ್ಮನ ರಕ್ತ ಪಂಚಮಸಾಲಿಗರ ಮೈಯಲ್ಲಿ ಹರಿಯುತ್ತಿದೆ. ನಾನು ಸಮಾಜದ ಮಗಳಾಗಿ ಹೋರಾಟಕ್ಕೆ ಬಂದಿದ್ದೇನೆ. ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿ ಮೀಸಲಾತಿ ಪಡೆಯಲು ಯತ್ನಿಸುತ್ತೇನೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು.

ಇದನ್ನು ಓದಿ: ಕುಷ್ಟಗಿ ತಹಶೀಲ್ದಾರ್ ಕಚೇರಿಯಿಂದ ಒದಗಿಸಲಾದ ಸೇವೆಗಳಲ್ಲಿ ಗಮನಾರ್ಹ ಪ್ರಗತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಅಶೋಕ್ ಮನಗೂಳಿ, ಮಾಜಿ ಶಾಸಕರಾದ ಹೆಚ್ ಎಂ ಶಿವಶಂಕರಪ್ಪ, ಎಬಿ ಪಾಟೀಲ್ ಸೇರಿದಂತೆ ಹಲವು ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here